ಬೀದರ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

ವರದಿಗಾರರುSite Administrator
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಬೀದರ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

ಬೀದರ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್‌ ಕೆ.ಎಚ್.‌ ಆದೇಶ ಆ.5ರಂದು ಹೊರಡಿಸಿದ್ದಾರೆ.

ಬೀದರ್‌ ವಿಶ್ವವಿದ್ಯಾಲಯ ಕುಲಸಚಿವರಾಗಿದ್ದ ಸುರೇಖಾ ಅವರು ಅದೇ ಸಂದರ್ಭದಲ್ಲಿ ಕೆಲ ದಿನಗಳ ಕಾಲ ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಇದೀಗ ಪುನಃ ಅಪರ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.